Saturday, September 09, 2006
ನಂಜುಳ್ಳೆ ಹೇಳಿದ್ದು
ನಾನು ನಿನಗೇನು ಮಾಡಿದ್ದೆ ಹೇಳು?
ಕೆಸರಿನಾಳದಲ್ಲಿ ನನ್ನ ಪಾಡಿಗೆ ನಾನು ಬೆಚ್ಚಗಿದ್ದೆ
ನೀನೇ ಮೀಟಿ ಹೊರತೆಗೆದೆ ನನ್ನ.
ಒಂದು ಉದ್ದ ಕೋಲಂತೆ
ಅದರ ಒಂದು ತುದಿಗೆ ದಾರವಂತೆ
ದಾರದ ತುದಿಗೆ ಮುಳ್ಳಂತೆ
ಆ ಮುಳ್ಳಿಗೆ ನನ್ನನ್ನು ಚುಚ್ಚುತ್ತಾರಂತೆ
-ಎಲ್ಲಾ ಕೇಳಿ ಗೊತ್ತಿತ್ತು ನನಗೆ;
ಅಂದು ನಿಜವಾಯ್ತು.
ಹೌದು, ಆಗಿನ್ನೂ ನನಗೆ ಜೀವವಿತ್ತು
ದೇಹಕ್ಕೆ ಚುಚ್ಚಿಕೊಂಡ ಮುಳ್ಳು
ನೀನು ನನ್ನನ್ನು ನೀರಿನಲ್ಲಿ ಮುಳು-
ಗಿಸಿದಾಗ ಹಿತವೆನಿಸಿತ್ತು.
ಎಲ್ಲಾ ಸಡಿಲಾಗಿ ನಾನು ಕೊಸರಾಡಿ...
ಆಗಲೇ ಕಂಡಿದ್ದು ಆ ಮೀನು
ಆಸೆ ಪಟ್ಟು ನನ್ನ ಬಳಿಗೆ ಬಂತು
ನನಗೆ ಭಯವಾಗುವ ಮೊದಲೇ
ಬಾಯಿ ಹಾಕಿಬಿಟ್ಟಿತ್ತು, ಪಾಪ
ನಿನ್ನ ಸಂಚಿಗೆ ಬಲಿಯಾಗಿಬಿಟ್ಟಿತ್ತು.
ಆ ಮೀನಿನ ಸಾವಿಗೆ ನಾನೇ ಕಾರಣವಾದೆನಾ ಅನ್ನಿಸಿ
ಪಾಪಪ್ರಜ್ಞೆಯಲ್ಲಿ ನರಳುತ್ತಿದ್ದೇನೆ
ಸತ್ತೂ ಬದುಕಿದ್ದೇನೆ.
ನಿನಗೇನೂ ಅನ್ನಿಸುವುದೇ ಇಲ್ಲವಾ?
ಮೀನಿಗೆ ಆಹಾರ ನಾನು;
ಅದನ್ನೇ ಬಲಿತೆಗೆದುಕೊಳ್ಳುವುದನ್ನು ಬಯಸಲಾರೆ.
ನಿನ್ನ ಆಹಾರ ಮೀನು;
ಅದಕ್ಕೇ, ಅದು ಸುಮ್ಮನೆ ಕಣ್ಮುಚ್ಚಿತು
ನೀನು ಯಾರಿಗೂ ಆಹಾರವಲ್ಲ ನೋಡು;
ಹಾಂ, ಗೊತ್ತಾಯಿತು, ಅದಕ್ಕೇ ನೀನು ಹೀಗಾಡುತ್ತೀ.
Tuesday, September 05, 2006
ಸಿಗ್ನಲ್ಲಿನ ಕ್ಷಣದ ಚಿತ್ರಗಳು
ಓಡುತ್ತಿರುವ ಬಸ್ಸುಗಳು ಕಾರುಗಳು ಬೈಕುಗಳು ಎಲ್ಲಾ ಕೆಂಪು ಸಿಗ್ನಲ್ಲು ಬೀಳುತ್ತಿದ್ದಂತೆ ಗಕ್ಕನೆ brake ಹೊಡೆದು ಒಂದು ಕ್ಷಣದ ಮಟ್ಟಿಗೆ ನಿಲ್ಲುತ್ತವೆ. ಹಾಗೆ ಅವು ನಿಲ್ಲುತ್ತಿದ್ದಂತೇ ಕೌಂಟ್ಡೌನ್ ಶುರುವಾಗುತ್ತದೆ. ಎಂಬತ್ತು, ಎಪ್ಪತ್ತೊಂಬತ್ತು, ಎಪ್ಪತ್ತೆಂಟು, ಎಪ್ಪತ್ತೇಳು, ಎಪ್ಪತ್ತಾರು.... ಅದು ಮೂರು, ಎರಡು, ಒಂದು, ಸೊನ್ನೆಯಾದ ಮೇಲೆ ಹಸಿರು ಬಣ್ಣದ ದೀಪ ಹೊತ್ತಿಕೊಳ್ಳುತ್ಥದೆ. ಅಷ್ಟರವರೆಗೆ ಕಾಯುವುದೇ ಇದೆ ರಗಳೆ.
ಕೆಲವರು ತಮ್ಮ ವೆಹಿಕಲ್ಲನ್ನು off ಮಾಡಿದ್ದಾರೆ. ಇನ್ನು ಕೆಲವರು ಹಾಗೇ ನಿಲ್ಲಿಸಿಕೊಂಡಿದ್ದಾರೆ. ಎಲ್ಲೈಸಿ ಏಜೆಂಟ್ ಕಾಮತ್ತರ ಗಾಡಿ ಅದೆಷ್ಟೇ brake ಹೊಡೆದರೂ ನಿಲ್ಲದೇ, ಸ್ಕೂಟರಿನ ಮುಂದಿನ ಗಾಲಿ ಎದುರುಗಡೆ ನಿಂತಿದ್ದ ಬಿಎಂಟೀಸಿ ಬಸ್ಸಿನ ಅಡಿಗೇ ಹೋಗಿಬಿಟ್ಟಿದೆ. 'ಇನ್ನೊಂದು ಸ್ವಲ್ಪ ಮುಂದೆ ಹೋಗಿದ್ದಿದ್ರೆ ಹ್ಯಾಂಡಲು ಹೋಗಿ ಬಸ್ಸಿಗೆ ಗುದ್ದೇ ಬಿಟ್ಟಿರೋದು, ಸಧ್ಯ!' ಅಂದ್ಕೊಂಡಿದಾರೆ ಕಾಮತರು. ಹಿಂದಕ್ಕಾದರೂ ತಗೊಳ್ಳಾಣಾಂದ್ರೆ ಕಾರೊಂದು ಬಂದು ಇವರ ಸ್ಕೂಟರಿನ ಹಿಂದೇ, ಒಂದೇ ಒಂದು ಇಂಚು ಗ್ಯಾಪು ಕೊಟ್ಟು ನಿಂತಿದೆ. 'ಅಯ್ಯೋ, ಈ ಬಸ್ಸಿನವನು ಸೀದಾ ಮುಂದೆ ಹೋದ್ರೆ ಸಾಕಿತ್ತು. ಒಂಚೂರು ಹಿಂದೆ ಬಂದ್ರೂ ನಂಗೆ ಗ್ರಾಚಾರ ತಪ್ಪಿದ್ದಲ್ಲ...' -ಕಾಮತರು ಮನಸ್ಸಿನಲ್ಲೇ ದೇವರನ್ನು ನೆನೆಯುತ್ತಿದ್ದಾರೆ.
ಮುಂದೆ, ಸಿಗ್ನಲ್ ಬ್ರೇಕ್ ಮಾಡಿ ಗಾಡಿ ಓಡಿಸಿದ್ದಕ್ಕಾಗಿ ಕಾಲೇಜು ಹುಡುಗನೊಬ್ಬನನ್ನು ಟ್ರಾಫಿಕ್ ಪೋಲೀಸ್ ಹಿಡಿದುಕೊಂಡು ದಂಡ ವಸೂಲಿ ಮಾಡುತ್ತಿದ್ದಾನೆ. ಅವನ ಬೆನ್ನಿಗೆ ಕಚ್ಚಿಕುಳಿತ ಹುಡುಗಿ ಬೆಪ್ಪುತಕಡಿಯಂತೆ ಆ ಪೋಲೀಸನ ಟೋಪಿಯನ್ನೇ ನೋಡುತ್ತಿದ್ದಾಳೆ.
ಜೀಬ್ರಾಲೈನಿಗೆ ಸರಿಯಾಗಿ brake ಹೊಡೆದು ನಿಲ್ಲಿಸಿಕೊಂಡಿರುವ ಗಾಡಿಯಲ್ಲಿ ಕುಳಿತ ಮಾರ್ಕೆಟಿಂಗ್ ವೃತ್ತಿಯಲ್ಲಿರುವ ಅಭಿಜಿತ್ ತನ್ನ ಹೆಲ್ಮೆಟ್ಟಿನ ಕಿಟಕಿಯಿಂದಲೇ ರೋಡ್ ಕ್ರಾಸ್ ಮಾಡುತ್ತಿರುವ ಹುಡುಗಿಯನ್ನು ನೋಡುತ್ತಿದ್ದಾನೆ. ಕೊಳಕಾದ, ಹರುಕು ಅಂಗಿಯ, ಕೈಯಲ್ಲೊಂದು ದೇವರ ಫೋಟೋ ಹಿಡಿದು ದುಡ್ಡು ಕೇಳಲು ಬರುತ್ತಿರುವ ಹುಡುಗನನ್ನು ಕಂಡದ್ದೇ, ಹಸಿರು ಲಾನ್ಸರ್ ಕಾರಿನ ಕಿಟಕಿಯ ಅಪಾರದರ್ಶಕ ಗಾಜು ಮೇಲಕ್ಕೆ ಸರಿದಿದೆ.
ಬಿಎಂಟೀಸಿ ಬಸ್ಸಿನಲ್ಲಿ ಕುಳಿತ ಜನ ಆಕಳಿಸುತ್ತಾ ಕಿಟಿಕಿಯಾಚೆಗೆ ತಲೆಹಾಕಿ ಇನ್ನೂ ಎಷ್ಟು ಸೆಕೆಂಡು ಬಾಕಿಯಿದೆ ಅಂತ ನೋಡುತ್ತಿದ್ದಾರೆ. ಇನ್ನೇನು ಮುಗೀತಾ ಬಂತು; ಆಗಲೇ ನಲವತ್ತೊಂಬತ್ತು, ನಲವತ್ತೆಂಟು, ನಲವತ್ತೇಳು... ಇನ್ನು ಸ್ವಲ್ಪ ಹೊತ್ತು; ಬಸ್ಸು start ಆಗಿ ಬಿಡುತ್ತದೆ.
ಕೈನೆಟಿಕ್ಕಿನ ಹುಡುಗಿ ತನ್ನ ಕೊರಳಲ್ಲಿ ನೇತುಹಾಕಿಕೊಂಡಿರುವ ಮೊಬೈಲನ್ನು ಕೈಗೆತ್ತಿಕೊಂಡು 'missed call' ಯಾರದ್ದು ಅಂತ ನೋಡುತ್ತಿದ್ದಾಳೆ. ಮೊಳಕೈ ತುಂಬಾ ಯಾವ್ಯಾವುದೋ ವೃತ್ತಪತ್ರಿಕೆ, ವಾರಪತ್ರಿಕೆ, ಮ್ಯಾಗಜೀನುಗಳನ್ನು ಜೋಲಿಸಿಕೊಂಡ ಕುಡಿಮೀಸೆಯ ಯುವಕ ಕಾರಿನ ಕಿಟಕಿ, ಆಟೊರಿಕ್ಷಾಗಳ ಅಕ್ಕಪಕ್ಕ ಎಲ್ಲಾ ಓಡಾಡುತ್ತಿದ್ದಾನೆ. ಇನ್ನೊಂದು ಸ್ವಲ್ಪ ಹೊತ್ತಿಗೇ ಇವತ್ತಿನ 'ಸಂಜೆವಾಣಿ' ರಿಲೀಸ್ ಆಗುತ್ತದೆ. ಆಗ ಈ ಯುವಕ, ಕೈ ತುಂಬಾ ಸಂಜೆವಾಣಿಗಳನ್ನೇ ತುಂಬಿಕೊಂಡು, 'ಬಿಸಿ ಬಿಸೀ ಸುದ್ಧಿ...' ಅಂತ ಕೂಗುತ್ತಾ ಓಡಾಡುತ್ತಾನೆ. ಅದರಲ್ಲಿದ್ದುದು ಬಿಸೀ ಸುದ್ಧಿಯೇ ಆಗಿದ್ದಲ್ಲಿ ಇವತ್ತು ರಾತ್ರಿ ಅವನ ಹೊಟ್ಟೆಗೆ ಊಟ ಸಿಕ್ಕುತ್ತದೆ; ಅದಿಲ್ಲದಿದ್ದರೆ ಇಲ್ಲ.
ಸಿಗ್ನಲ್ಲು ಮುಗಿಯುತ್ತಿದೆ: ಅಗೋ, ಆಗಲೇ ಹದಿನೆಂಟು, ಹದಿನೇಳು.... ಉಹೂಂ, ಇನ್ನೂ ಪಾಪ್ ಮ್ಯೂಸಿಕ್ ಹಾಕಿಕೊಂಡು ಕಾರೊಳಗೆ ಕುಳಿತಿರುವ software engineerನ ಸಿಗರೇಟು ಮುಗಿದಿಲ್ಲ. ಅವನು ಬಿಟ್ಟ ಹೊಗೆ ಕಾರೊಳಗೆಲ್ಲಾ ತುಂಬಿಕೊಂಡಿದೆ.
ಅರೆ! ಸಿಗ್ನಲ್ಲು ಮುಗಿಯುತ್ತಿದೆ.. ಒಂಬತ್ತು, ಎಂಟು, ಏಳು... ಎಲ್ಲಾ ತಮ್ಮ ವೆಹಿಕಲ್ಲನ್ನು ಸ್ಟಾರ್ಟ್ ಮಾಡುತ್ತಿದ್ದಾರೆ.. ಇಲ್ಲ, 'ತಾಯಿಯ ಆಶೀರ್ವಾದ' ಎಂಬ ಬೋರ್ಡಿರುವ ಆಟೋ ಅದೇಕೋ ಸ್ಟಾರ್ಟೇ ಆಗುತ್ತಿಲ್ಲ. ಡ್ರೈವರು ಈಗ ಪುಳಕ್ಕನೆ ಕೆಳಗಿಳಿದು, ಹಿಂದೆ ಬಂದು, ಅಡಿಷನಲ್ ಸಿಲಿಂಡರಿಗೆ ಕನೆಕ್ಟ್ ಮಾಡುತ್ತಿದ್ದಾನೆ. ಅಗೋ ಸಿಗ್ನಲ್ಲು ಮುಗಿಯಿತು.. ಎರಡು, ಒಂದು, ಸೊನ್ನೆ..... ಆಟೋ ಸ್ಟಾರ್ಟ್ ಆಗುತ್ತಿದೆ.. ಹಿಂದಿನಿಂದ ಒಂದೇ ಸಮನೆ ಹಾರನ್ನುಗಳ ಶಬ್ದ ಕೇಳಿಬರುತ್ತಿದೆ. ಅಬ್ಬ, ಆಟೋ ಹೊರಟಿತು. ಅದರ ಹಿಂದಿನಿಂದಲೇ, ಕಾಮತ್ತರ ಗಾಡಿಯೂ ಸೇರಿದಂತೆ, ಒಂದೊಂದೇ ವೆಹಿಕಲ್ಲುಗಳು ಭರಭರನೆ ಓಡಹತ್ತಿವೆ: ಬಿಡುಗಡೆಯ ಖುಷಿಯಲ್ಲಿ.
(ಬರೆದದ್ದು: ೨೬.೦೯.೨೦೦೪)
ಕೆಲವರು ತಮ್ಮ ವೆಹಿಕಲ್ಲನ್ನು off ಮಾಡಿದ್ದಾರೆ. ಇನ್ನು ಕೆಲವರು ಹಾಗೇ ನಿಲ್ಲಿಸಿಕೊಂಡಿದ್ದಾರೆ. ಎಲ್ಲೈಸಿ ಏಜೆಂಟ್ ಕಾಮತ್ತರ ಗಾಡಿ ಅದೆಷ್ಟೇ brake ಹೊಡೆದರೂ ನಿಲ್ಲದೇ, ಸ್ಕೂಟರಿನ ಮುಂದಿನ ಗಾಲಿ ಎದುರುಗಡೆ ನಿಂತಿದ್ದ ಬಿಎಂಟೀಸಿ ಬಸ್ಸಿನ ಅಡಿಗೇ ಹೋಗಿಬಿಟ್ಟಿದೆ. 'ಇನ್ನೊಂದು ಸ್ವಲ್ಪ ಮುಂದೆ ಹೋಗಿದ್ದಿದ್ರೆ ಹ್ಯಾಂಡಲು ಹೋಗಿ ಬಸ್ಸಿಗೆ ಗುದ್ದೇ ಬಿಟ್ಟಿರೋದು, ಸಧ್ಯ!' ಅಂದ್ಕೊಂಡಿದಾರೆ ಕಾಮತರು. ಹಿಂದಕ್ಕಾದರೂ ತಗೊಳ್ಳಾಣಾಂದ್ರೆ ಕಾರೊಂದು ಬಂದು ಇವರ ಸ್ಕೂಟರಿನ ಹಿಂದೇ, ಒಂದೇ ಒಂದು ಇಂಚು ಗ್ಯಾಪು ಕೊಟ್ಟು ನಿಂತಿದೆ. 'ಅಯ್ಯೋ, ಈ ಬಸ್ಸಿನವನು ಸೀದಾ ಮುಂದೆ ಹೋದ್ರೆ ಸಾಕಿತ್ತು. ಒಂಚೂರು ಹಿಂದೆ ಬಂದ್ರೂ ನಂಗೆ ಗ್ರಾಚಾರ ತಪ್ಪಿದ್ದಲ್ಲ...' -ಕಾಮತರು ಮನಸ್ಸಿನಲ್ಲೇ ದೇವರನ್ನು ನೆನೆಯುತ್ತಿದ್ದಾರೆ.
ಮುಂದೆ, ಸಿಗ್ನಲ್ ಬ್ರೇಕ್ ಮಾಡಿ ಗಾಡಿ ಓಡಿಸಿದ್ದಕ್ಕಾಗಿ ಕಾಲೇಜು ಹುಡುಗನೊಬ್ಬನನ್ನು ಟ್ರಾಫಿಕ್ ಪೋಲೀಸ್ ಹಿಡಿದುಕೊಂಡು ದಂಡ ವಸೂಲಿ ಮಾಡುತ್ತಿದ್ದಾನೆ. ಅವನ ಬೆನ್ನಿಗೆ ಕಚ್ಚಿಕುಳಿತ ಹುಡುಗಿ ಬೆಪ್ಪುತಕಡಿಯಂತೆ ಆ ಪೋಲೀಸನ ಟೋಪಿಯನ್ನೇ ನೋಡುತ್ತಿದ್ದಾಳೆ.
ಜೀಬ್ರಾಲೈನಿಗೆ ಸರಿಯಾಗಿ brake ಹೊಡೆದು ನಿಲ್ಲಿಸಿಕೊಂಡಿರುವ ಗಾಡಿಯಲ್ಲಿ ಕುಳಿತ ಮಾರ್ಕೆಟಿಂಗ್ ವೃತ್ತಿಯಲ್ಲಿರುವ ಅಭಿಜಿತ್ ತನ್ನ ಹೆಲ್ಮೆಟ್ಟಿನ ಕಿಟಕಿಯಿಂದಲೇ ರೋಡ್ ಕ್ರಾಸ್ ಮಾಡುತ್ತಿರುವ ಹುಡುಗಿಯನ್ನು ನೋಡುತ್ತಿದ್ದಾನೆ. ಕೊಳಕಾದ, ಹರುಕು ಅಂಗಿಯ, ಕೈಯಲ್ಲೊಂದು ದೇವರ ಫೋಟೋ ಹಿಡಿದು ದುಡ್ಡು ಕೇಳಲು ಬರುತ್ತಿರುವ ಹುಡುಗನನ್ನು ಕಂಡದ್ದೇ, ಹಸಿರು ಲಾನ್ಸರ್ ಕಾರಿನ ಕಿಟಕಿಯ ಅಪಾರದರ್ಶಕ ಗಾಜು ಮೇಲಕ್ಕೆ ಸರಿದಿದೆ.
ಬಿಎಂಟೀಸಿ ಬಸ್ಸಿನಲ್ಲಿ ಕುಳಿತ ಜನ ಆಕಳಿಸುತ್ತಾ ಕಿಟಿಕಿಯಾಚೆಗೆ ತಲೆಹಾಕಿ ಇನ್ನೂ ಎಷ್ಟು ಸೆಕೆಂಡು ಬಾಕಿಯಿದೆ ಅಂತ ನೋಡುತ್ತಿದ್ದಾರೆ. ಇನ್ನೇನು ಮುಗೀತಾ ಬಂತು; ಆಗಲೇ ನಲವತ್ತೊಂಬತ್ತು, ನಲವತ್ತೆಂಟು, ನಲವತ್ತೇಳು... ಇನ್ನು ಸ್ವಲ್ಪ ಹೊತ್ತು; ಬಸ್ಸು start ಆಗಿ ಬಿಡುತ್ತದೆ.
ಕೈನೆಟಿಕ್ಕಿನ ಹುಡುಗಿ ತನ್ನ ಕೊರಳಲ್ಲಿ ನೇತುಹಾಕಿಕೊಂಡಿರುವ ಮೊಬೈಲನ್ನು ಕೈಗೆತ್ತಿಕೊಂಡು 'missed call' ಯಾರದ್ದು ಅಂತ ನೋಡುತ್ತಿದ್ದಾಳೆ. ಮೊಳಕೈ ತುಂಬಾ ಯಾವ್ಯಾವುದೋ ವೃತ್ತಪತ್ರಿಕೆ, ವಾರಪತ್ರಿಕೆ, ಮ್ಯಾಗಜೀನುಗಳನ್ನು ಜೋಲಿಸಿಕೊಂಡ ಕುಡಿಮೀಸೆಯ ಯುವಕ ಕಾರಿನ ಕಿಟಕಿ, ಆಟೊರಿಕ್ಷಾಗಳ ಅಕ್ಕಪಕ್ಕ ಎಲ್ಲಾ ಓಡಾಡುತ್ತಿದ್ದಾನೆ. ಇನ್ನೊಂದು ಸ್ವಲ್ಪ ಹೊತ್ತಿಗೇ ಇವತ್ತಿನ 'ಸಂಜೆವಾಣಿ' ರಿಲೀಸ್ ಆಗುತ್ತದೆ. ಆಗ ಈ ಯುವಕ, ಕೈ ತುಂಬಾ ಸಂಜೆವಾಣಿಗಳನ್ನೇ ತುಂಬಿಕೊಂಡು, 'ಬಿಸಿ ಬಿಸೀ ಸುದ್ಧಿ...' ಅಂತ ಕೂಗುತ್ತಾ ಓಡಾಡುತ್ತಾನೆ. ಅದರಲ್ಲಿದ್ದುದು ಬಿಸೀ ಸುದ್ಧಿಯೇ ಆಗಿದ್ದಲ್ಲಿ ಇವತ್ತು ರಾತ್ರಿ ಅವನ ಹೊಟ್ಟೆಗೆ ಊಟ ಸಿಕ್ಕುತ್ತದೆ; ಅದಿಲ್ಲದಿದ್ದರೆ ಇಲ್ಲ.
ಸಿಗ್ನಲ್ಲು ಮುಗಿಯುತ್ತಿದೆ: ಅಗೋ, ಆಗಲೇ ಹದಿನೆಂಟು, ಹದಿನೇಳು.... ಉಹೂಂ, ಇನ್ನೂ ಪಾಪ್ ಮ್ಯೂಸಿಕ್ ಹಾಕಿಕೊಂಡು ಕಾರೊಳಗೆ ಕುಳಿತಿರುವ software engineerನ ಸಿಗರೇಟು ಮುಗಿದಿಲ್ಲ. ಅವನು ಬಿಟ್ಟ ಹೊಗೆ ಕಾರೊಳಗೆಲ್ಲಾ ತುಂಬಿಕೊಂಡಿದೆ.
ಅರೆ! ಸಿಗ್ನಲ್ಲು ಮುಗಿಯುತ್ತಿದೆ.. ಒಂಬತ್ತು, ಎಂಟು, ಏಳು... ಎಲ್ಲಾ ತಮ್ಮ ವೆಹಿಕಲ್ಲನ್ನು ಸ್ಟಾರ್ಟ್ ಮಾಡುತ್ತಿದ್ದಾರೆ.. ಇಲ್ಲ, 'ತಾಯಿಯ ಆಶೀರ್ವಾದ' ಎಂಬ ಬೋರ್ಡಿರುವ ಆಟೋ ಅದೇಕೋ ಸ್ಟಾರ್ಟೇ ಆಗುತ್ತಿಲ್ಲ. ಡ್ರೈವರು ಈಗ ಪುಳಕ್ಕನೆ ಕೆಳಗಿಳಿದು, ಹಿಂದೆ ಬಂದು, ಅಡಿಷನಲ್ ಸಿಲಿಂಡರಿಗೆ ಕನೆಕ್ಟ್ ಮಾಡುತ್ತಿದ್ದಾನೆ. ಅಗೋ ಸಿಗ್ನಲ್ಲು ಮುಗಿಯಿತು.. ಎರಡು, ಒಂದು, ಸೊನ್ನೆ..... ಆಟೋ ಸ್ಟಾರ್ಟ್ ಆಗುತ್ತಿದೆ.. ಹಿಂದಿನಿಂದ ಒಂದೇ ಸಮನೆ ಹಾರನ್ನುಗಳ ಶಬ್ದ ಕೇಳಿಬರುತ್ತಿದೆ. ಅಬ್ಬ, ಆಟೋ ಹೊರಟಿತು. ಅದರ ಹಿಂದಿನಿಂದಲೇ, ಕಾಮತ್ತರ ಗಾಡಿಯೂ ಸೇರಿದಂತೆ, ಒಂದೊಂದೇ ವೆಹಿಕಲ್ಲುಗಳು ಭರಭರನೆ ಓಡಹತ್ತಿವೆ: ಬಿಡುಗಡೆಯ ಖುಷಿಯಲ್ಲಿ.
(ಬರೆದದ್ದು: ೨೬.೦೯.೨೦೦೪)
Monday, September 04, 2006
ನನ್ನ ನೆರಳು
ನಮ್ಮೂರಿನ ಮಣ್ಣು ರಸ್ತೆಯಲ್ಲಿ
ಕಡುಗತ್ತಲ ರಾತ್ರಿಯಲ್ಲಿ
ಬೀದಿ ದೀಪಗಳ ಬೆಳಕಿನಲ್ಲಿ ನಡೆಯುತ್ತಿದ್ದೇನೆ.
ಅಲ್ಲೊಂದು ಇಲ್ಲೊಂದು ದೀಪ
ಒಂದರ ಬೆಳಕು ಮುಗಿದ ನಂತರ ಮತ್ತೊಂದರದ್ದು ಶುರುವಾಗುತ್ತದೆ.
ಎದುರುಗಡೆಯ ದೀಪದ ಬೆಳಕು
ನನ್ನ ಮೈಮೇಲೆ ಬಿದ್ದದ್ದೇ
ನನ್ನ ನೆರಳು ಹಿಂದೆ ಸರಿಯುತ್ತದೆ.
ಅದು ನನಗಿಂತ ಉದ್ದ, ಊದ್ದವಾಗುತ್ತದೆ..
ಕ್ರಮೇಣ ಬರುಬರುತ್ತಾ ಚಿಕ್ಕದಾಗುತ್ತಾ ನನ್ನದೇ ಅಳತೆಗೆ ಬರುತ್ತದೆ..
ಕೊನೆಗೆ ನನಗಿಂತಲೂ ಚಿಕ್ಕದಾಗುತ್ತಾ, ದೀಪದ ಕೆಳಗಿನ ಒಂದು ಬಿಂದುವಿನಲ್ಲಿ ಇಲ್ಲವಾಗುತ್ತದೆ.
ಇನ್ನೊಂದು ಹೆಜ್ಜೆ ಮುಂದೆ ಇಟ್ಟರೆ ಸಾಕು:
ನನ್ನ ಮುಂದೆ ಸೃಷ್ಟಿಯಾಗುತ್ತಾ, ದೊಡ್ಡದಾಗುತ್ತಾ,
ನನ್ನ ಮುಂದಿನ ಎಷ್ಟೋ ಜಾಗವನ್ನು ಆಕ್ರಮಿಸಿಕೊಂಡುಬಿಡುತ್ತದೆ.
ನನ್ನ ಚಪ್ಪಲಿ - ಅದರ ಚಪ್ಪಲಿ ಒಂದೇ;
ನನ್ನ ಕಾಲಿನ ತುದಿ ಅದರ ಕಾಲಿನ ತುದಿಗೆ
ಸದಾ ಜಾಯಿಂಟಾಗೇ ಇರುತ್ತೆ;
ಅದಕ್ಕೆ ನನ್ನನ್ನು ಬಿಟ್ಟಿರಲು ಆಗುವುದಿಲ್ಲ;
ನನಗೂ.
ಬೀದಿ ದೀಪಗಳ ಸಾಲು ಮುಗಿಯುವುದೇ ಇಲ್ಲ.
ನಾನು ಈ ಕಪ್ಪನೆಯ ಮನುಷ್ಯನನ್ನು ಹಿಂಬಾಲಿಸುತ್ತಾ,
ಅವನು ನನ್ನನ್ನು ಹಿಂಬಾಲಿಸುತ್ತಾ ಸಾಗುತ್ತಿದ್ದೇವೆ.
ಬರ್ನಾದ, ಟ್ಯೂಬಿಲ್ಲದ ಒಂದು ಸ್ಥಳದಲ್ಲಿ ಇವನಿಲ್ಲದೇ ನನಗೆ ಬೇಜಾರು.
ಅಲ್ಲಿ ನನಗೆ ನಾನೂ ಕಾಣಿಸುವುದಿಲ್ಲ.
ಒಂಥರಾ ಭಯವಾಗಲು ಶುರುವಾಗುತ್ತದೆ..
ನಾನು ಬೇಗ ಬೇಗನೆ ನಡೆಯುತ್ತೇನೆ.
ದೂರದಲ್ಲೊಂದು ದೀಪ-ದೀಪದ ಬೆಳಕು: ಚಂದ್ರ-ಬೆಳದಿಂಗಳಂತೆ.
ಮತ್ತೆ ಈತ ಕಾಣಿಸಿಕೊಳ್ಳುತ್ತಾನೆ.
ಹಿಂದಿನಿಂದ ಮುಂದೆ ಬರುತ್ತಾನೆ.
ನನ್ನ ಗೆಳೆಯನಂತೆ, ಬೆಂಗಾವಲಿನವನಂತೆ ಭಾಸವಾಗುತ್ತಾನೆ.
ಆಪ್ತನಾಗುತ್ತಾನೆ.
ಇವನಿಗೆ ಒಂದು ಹೆಸರಿಡಬೇಕು ಅಂದುಕೊಳ್ಳುತ್ತೇನೆ.
ಅಸಲು ಅಸ್ಥಿತ್ವವೇ ಇಲ್ಲದ, ಕಣ್ಣಿರದ, ಬಾಯಿರದ,
ಮಾತನಾಡದ ಈ ಆಕೃತಿಗೇಕೆ ಹೆಸರು ಅನ್ನಿಸುತ್ತದೆ.
ಎಷ್ಟೆಂದರೂ ಅದು ನಾನೇ ಅಲ್ಲವೇ ಅನ್ನಿಸುತ್ತದೆ.
ಹಾಗನಿಸಿದ ಕೂಡಲೇ ಅದರ ಮೇಲೆ ಅಧಿಕಾರೀ ಮನೋಭಾವ ಬರುತ್ತದೆ.
'ಏಯ್, ನೀನ್ಯಾಕೆ ನನಗಿಂತ ಉದ್ದವಾಗಿದ್ದೀಯ?' -ಕೇಳುತ್ತೇನೆ.
ಉತ್ತರವಿಲ್ಲ; ಮೌನ.
ದೀಪದ ಸಾಲಿನ ರಸ್ತೆ ಮುಂದುವರೆದಿದೆ.
ನನಗೋ ಈತನ ಸಂಗಡ ಬೇಸರ ತಂದಿದೆ.
ಈತನಿಂದ ಹೇಗಾದರೂ ಬೇರಾಗಬೇಕು ಅನ್ನಿಸುತ್ತಿದೆ.
ಥಟ್ಟಂತ ಐಡಿಯಾ ಹೊಳೆಯುತ್ತದೆ:
ದೀಪ ಹಿಂದಾದ ಕ್ಷಣವೊಂದರಲ್ಲಿ,
ನಡೆಯುತ್ತಿದ್ದ ನಾನು ಒಂದು ಜಂಪ್ ಮಾಡಿದೆ..
ವ್ಹಾವ್! ಆತ ನನ್ನನ್ನು ಬಿಟ್ಟು, ಸದಾ ಕಾಲಿಗೆ ಹೊಂದಿಕೊಂಡೇ ಇರುವುದನ್ನು ಬಿಟ್ಟು,
ತಾನೂ ಒಂದು ಕುಪ್ಪಳಿಕೆ ಹಾರಿಬಿಡಬೇಕೇ...!
ಮಜಾ ಅಂದರೆ, ನಾನು ನೆಲದಿಂದ ಮೇಲೆ ಹಾರಿದೆ;
ಆತ ನೆಲದಲ್ಲೇ ಹಾರಿದ.
ಸದಾ ನೆಲಕ್ಕೆ ಅಂಟಿಕೊಂಡೇ ಇರಬೇಕಾದ ಅವನ ಸ್ಥಿತಿಯ ಬಗ್ಗೆ ನನಗೆ ಕನಿಕರವಾಗುತ್ತಿದೆ..
ಅವನಿಗೊಂದು ಸ್ವಂತ ಅಸ್ಥಿತ್ವವಿದ್ದಿದ್ದರೆ...
ಬಾಹ್ಯ ರೂಪ ಕೊಡುವಂತಿದ್ದಿದ್ದರೆ...
ಆತನೂ ನನ್ನಂತೆಯೇ ನನ್ನ ಜೊತೆಯಲ್ಲೇ ನಡೆಯುವಂತಿದ್ದಿದ್ದರೆ...
ಬೀದಿದೀಪದ ಸಾಲು ಮುಂದುವರೆದಿದೆ...
(ಬರೆದದ್ದು: ಬೆಂಗಳೂರಿನಲ್ಲಿ, ಜ್ವರದ ತಾಪಕ್ಕೆ ರಜೆ ಹಾಕಿದ ಒಂದು ದಿನ,
ಊರಿನ ನೆನಪಿನ ನೆರಳಲ್ಲಿ.. //೨೦.೦೯.೨೦೦೩)
ಕಡುಗತ್ತಲ ರಾತ್ರಿಯಲ್ಲಿ
ಬೀದಿ ದೀಪಗಳ ಬೆಳಕಿನಲ್ಲಿ ನಡೆಯುತ್ತಿದ್ದೇನೆ.
ಅಲ್ಲೊಂದು ಇಲ್ಲೊಂದು ದೀಪ
ಒಂದರ ಬೆಳಕು ಮುಗಿದ ನಂತರ ಮತ್ತೊಂದರದ್ದು ಶುರುವಾಗುತ್ತದೆ.
ಎದುರುಗಡೆಯ ದೀಪದ ಬೆಳಕು
ನನ್ನ ಮೈಮೇಲೆ ಬಿದ್ದದ್ದೇ
ನನ್ನ ನೆರಳು ಹಿಂದೆ ಸರಿಯುತ್ತದೆ.
ಅದು ನನಗಿಂತ ಉದ್ದ, ಊದ್ದವಾಗುತ್ತದೆ..
ಕ್ರಮೇಣ ಬರುಬರುತ್ತಾ ಚಿಕ್ಕದಾಗುತ್ತಾ ನನ್ನದೇ ಅಳತೆಗೆ ಬರುತ್ತದೆ..
ಕೊನೆಗೆ ನನಗಿಂತಲೂ ಚಿಕ್ಕದಾಗುತ್ತಾ, ದೀಪದ ಕೆಳಗಿನ ಒಂದು ಬಿಂದುವಿನಲ್ಲಿ ಇಲ್ಲವಾಗುತ್ತದೆ.
ಇನ್ನೊಂದು ಹೆಜ್ಜೆ ಮುಂದೆ ಇಟ್ಟರೆ ಸಾಕು:
ನನ್ನ ಮುಂದೆ ಸೃಷ್ಟಿಯಾಗುತ್ತಾ, ದೊಡ್ಡದಾಗುತ್ತಾ,
ನನ್ನ ಮುಂದಿನ ಎಷ್ಟೋ ಜಾಗವನ್ನು ಆಕ್ರಮಿಸಿಕೊಂಡುಬಿಡುತ್ತದೆ.
ನನ್ನ ಚಪ್ಪಲಿ - ಅದರ ಚಪ್ಪಲಿ ಒಂದೇ;
ನನ್ನ ಕಾಲಿನ ತುದಿ ಅದರ ಕಾಲಿನ ತುದಿಗೆ
ಸದಾ ಜಾಯಿಂಟಾಗೇ ಇರುತ್ತೆ;
ಅದಕ್ಕೆ ನನ್ನನ್ನು ಬಿಟ್ಟಿರಲು ಆಗುವುದಿಲ್ಲ;
ನನಗೂ.
ಬೀದಿ ದೀಪಗಳ ಸಾಲು ಮುಗಿಯುವುದೇ ಇಲ್ಲ.
ನಾನು ಈ ಕಪ್ಪನೆಯ ಮನುಷ್ಯನನ್ನು ಹಿಂಬಾಲಿಸುತ್ತಾ,
ಅವನು ನನ್ನನ್ನು ಹಿಂಬಾಲಿಸುತ್ತಾ ಸಾಗುತ್ತಿದ್ದೇವೆ.
ಬರ್ನಾದ, ಟ್ಯೂಬಿಲ್ಲದ ಒಂದು ಸ್ಥಳದಲ್ಲಿ ಇವನಿಲ್ಲದೇ ನನಗೆ ಬೇಜಾರು.
ಅಲ್ಲಿ ನನಗೆ ನಾನೂ ಕಾಣಿಸುವುದಿಲ್ಲ.
ಒಂಥರಾ ಭಯವಾಗಲು ಶುರುವಾಗುತ್ತದೆ..
ನಾನು ಬೇಗ ಬೇಗನೆ ನಡೆಯುತ್ತೇನೆ.
ದೂರದಲ್ಲೊಂದು ದೀಪ-ದೀಪದ ಬೆಳಕು: ಚಂದ್ರ-ಬೆಳದಿಂಗಳಂತೆ.
ಮತ್ತೆ ಈತ ಕಾಣಿಸಿಕೊಳ್ಳುತ್ತಾನೆ.
ಹಿಂದಿನಿಂದ ಮುಂದೆ ಬರುತ್ತಾನೆ.
ನನ್ನ ಗೆಳೆಯನಂತೆ, ಬೆಂಗಾವಲಿನವನಂತೆ ಭಾಸವಾಗುತ್ತಾನೆ.
ಆಪ್ತನಾಗುತ್ತಾನೆ.
ಇವನಿಗೆ ಒಂದು ಹೆಸರಿಡಬೇಕು ಅಂದುಕೊಳ್ಳುತ್ತೇನೆ.
ಅಸಲು ಅಸ್ಥಿತ್ವವೇ ಇಲ್ಲದ, ಕಣ್ಣಿರದ, ಬಾಯಿರದ,
ಮಾತನಾಡದ ಈ ಆಕೃತಿಗೇಕೆ ಹೆಸರು ಅನ್ನಿಸುತ್ತದೆ.
ಎಷ್ಟೆಂದರೂ ಅದು ನಾನೇ ಅಲ್ಲವೇ ಅನ್ನಿಸುತ್ತದೆ.
ಹಾಗನಿಸಿದ ಕೂಡಲೇ ಅದರ ಮೇಲೆ ಅಧಿಕಾರೀ ಮನೋಭಾವ ಬರುತ್ತದೆ.
'ಏಯ್, ನೀನ್ಯಾಕೆ ನನಗಿಂತ ಉದ್ದವಾಗಿದ್ದೀಯ?' -ಕೇಳುತ್ತೇನೆ.
ಉತ್ತರವಿಲ್ಲ; ಮೌನ.
ದೀಪದ ಸಾಲಿನ ರಸ್ತೆ ಮುಂದುವರೆದಿದೆ.
ನನಗೋ ಈತನ ಸಂಗಡ ಬೇಸರ ತಂದಿದೆ.
ಈತನಿಂದ ಹೇಗಾದರೂ ಬೇರಾಗಬೇಕು ಅನ್ನಿಸುತ್ತಿದೆ.
ಥಟ್ಟಂತ ಐಡಿಯಾ ಹೊಳೆಯುತ್ತದೆ:
ದೀಪ ಹಿಂದಾದ ಕ್ಷಣವೊಂದರಲ್ಲಿ,
ನಡೆಯುತ್ತಿದ್ದ ನಾನು ಒಂದು ಜಂಪ್ ಮಾಡಿದೆ..
ವ್ಹಾವ್! ಆತ ನನ್ನನ್ನು ಬಿಟ್ಟು, ಸದಾ ಕಾಲಿಗೆ ಹೊಂದಿಕೊಂಡೇ ಇರುವುದನ್ನು ಬಿಟ್ಟು,
ತಾನೂ ಒಂದು ಕುಪ್ಪಳಿಕೆ ಹಾರಿಬಿಡಬೇಕೇ...!
ಮಜಾ ಅಂದರೆ, ನಾನು ನೆಲದಿಂದ ಮೇಲೆ ಹಾರಿದೆ;
ಆತ ನೆಲದಲ್ಲೇ ಹಾರಿದ.
ಸದಾ ನೆಲಕ್ಕೆ ಅಂಟಿಕೊಂಡೇ ಇರಬೇಕಾದ ಅವನ ಸ್ಥಿತಿಯ ಬಗ್ಗೆ ನನಗೆ ಕನಿಕರವಾಗುತ್ತಿದೆ..
ಅವನಿಗೊಂದು ಸ್ವಂತ ಅಸ್ಥಿತ್ವವಿದ್ದಿದ್ದರೆ...
ಬಾಹ್ಯ ರೂಪ ಕೊಡುವಂತಿದ್ದಿದ್ದರೆ...
ಆತನೂ ನನ್ನಂತೆಯೇ ನನ್ನ ಜೊತೆಯಲ್ಲೇ ನಡೆಯುವಂತಿದ್ದಿದ್ದರೆ...
ಬೀದಿದೀಪದ ಸಾಲು ಮುಂದುವರೆದಿದೆ...
(ಬರೆದದ್ದು: ಬೆಂಗಳೂರಿನಲ್ಲಿ, ಜ್ವರದ ತಾಪಕ್ಕೆ ರಜೆ ಹಾಕಿದ ಒಂದು ದಿನ,
ಊರಿನ ನೆನಪಿನ ನೆರಳಲ್ಲಿ.. //೨೦.೦೯.೨೦೦೩)
Saturday, September 02, 2006
ಕಾಣೆಯಾದವರ ಪಟ್ಟಿಯಲ್ಲಿ ನಾನು!
ಗೆಳತಿ ನಿಮ್ಮಿ ಬರೆದುಕೊಟ್ಟ ಆಟೋಗ್ರಾಫಿನ ಕೊನೆಯ ಸೆಂಟೆನ್ಸುಗಳು ಹೀಗಿದ್ದವು:
"Be a good human, be a good student, be a good son, be a good husband, be a good father, be a good citizen... then only your life is worth living"
ಇವು ಕೇವಲ ಆಟೋಗ್ರಾಫ್ ಆಗಿರದೆ, ನನಗೆ ಕೊಡುವ advise ಆಗಿರದೆ, ನೇರವಾಗಿ ನನ್ನ roleಗಳ ಬಗ್ಗೆ ನನಗೇ ಪರಿಚಯ ಮಾಡಿಕೊಡುವ ಪ್ರಯತ್ನವೂ ಆಗಿತ್ತು ಅಂತ ಅನ್ನಿಸೊತ್ತೆ.
ನಿಜ, ನಾವೆಲ್ಲಾ ಬದುಕುವ ಒಂದೇ ಒಂದು ಬದುಕಿನಲ್ಲಿ ಎಷ್ಟೆಲ್ಲಾ ಪಾತ್ರಗಳನ್ನು ನಿರ್ವಹಿಸುತ್ತೇವೆ! ಅಪ್ಪನಿಗೆ ಮಗ, ಅಜ್ಜಿಗೆ ಮೊಮ್ಮಗ, ಮಾವನಿಗೆ ಅಳಿಯ, ಮಾವನ ಮಗಳಿಗೆ ಭಾವಯ್ಯ, ಹೆಂಡತಿಗೆ ಗಂಡ, ಮಗನಿಗೆ ಅಪ್ಪ, ಮೊಮ್ಮಗನಿಗೆ ಅಜ್ಜ! ಊರ ಜನರಿಗೆ ಗ್ರಾಮಸ್ಥ, ಬೇರೆ ಊರಿಗೆ ಹೋದರೆ ನೆಂಟ, ಹೊಸ ಊರಿಗೆ ಹೋದರೆ ಅತಿಥಿ, ಆಫೀಸಿನಲ್ಲಿ ಮ್ಯಾನೇಜರ್ರು, ಆಳಿಗೆ ಯಜಮಾನ, ಅಂಗಡಿಯವನಿಗೆ ಕಸ್ಟಮರ್ರು.... ಹೀಗೇ.
ಈಗ ನನ್ನನ್ನೇ ತೆಗೆದುಕೊಳ್ಳಿ: ಅಪ್ಪ 'ಪಾಪು' ಅನ್ನುತ್ತಾನೆ, ಅಮ್ಮ 'ಅಪ್ಪಿ' ಅನ್ನುತ್ತಾಳೆ, ಮಾವ 'ಗುಂಡ' ಅನ್ನುತ್ತಾನೆ, ಊರ ಹುಡುಗರೆಲ್ಲ 'ಸೂರು' ಅನ್ನುತ್ತಾರೆ, ಪ್ರೀತಿಯ ಕೆಲವು ಗೆಳೆಯರು 'ಸುಶಿ' ಅನ್ನುತ್ತಾರೆ, ಆಫೀಸಿನಲ್ಲಿ ನಾನು 'ಮಿಸ್ಟರ್ ಸುಶ್ರುತ್', ಆಫೀಸಿಗೆ ಬರುವ client ಗಳಿಗೆ 'ಸರ್'!
ಇಷ್ಟೆಲ್ಲಾ designationಗಳ ಮಧ್ಯೆ 'ನಾನು' ಕಳೆದುಹೋಗಿದ್ದೇನೇನೋ ಅಂತ ಒಮ್ಮೊಮ್ಮೆ ಭಯವಾಗುತ್ತದೆ. ಇವುಗಳೆಲ್ಲದರ ಮಧ್ಯೆ 'ನಾನು' ಯಾರು ಎಂಬ ಪ್ರಶ್ನೆ ಒಮ್ಮೊಮ್ಮೆ ಎದ್ದುಬಿಡುತ್ತದೆ. ಅಥವಾ ಇವೆಲ್ಲವೂ ಸೇರಿದರೇ ನಾನಾ? ಹಾಗೆನಿಲ್ಲ; ಇದರಲ್ಲಿ ಒಂದೆರಡು ಪಾತ್ರಗಳನ್ನು ತೆಗೆದರೂ ನಾನು ನಾನಾಗೇ ಇರುತ್ತೇನಲ್ಲಾ, ಎಲ್ಲವನ್ನೂ ತೆಗೆದರೂ.... ಅರೆ! ಹಾಗಾದರೆ ನಾನೆಲ್ಲಿ?
'ನಾನು' ಯಾರು?
"Be a good human, be a good student, be a good son, be a good husband, be a good father, be a good citizen... then only your life is worth living"
ಇವು ಕೇವಲ ಆಟೋಗ್ರಾಫ್ ಆಗಿರದೆ, ನನಗೆ ಕೊಡುವ advise ಆಗಿರದೆ, ನೇರವಾಗಿ ನನ್ನ roleಗಳ ಬಗ್ಗೆ ನನಗೇ ಪರಿಚಯ ಮಾಡಿಕೊಡುವ ಪ್ರಯತ್ನವೂ ಆಗಿತ್ತು ಅಂತ ಅನ್ನಿಸೊತ್ತೆ.
ನಿಜ, ನಾವೆಲ್ಲಾ ಬದುಕುವ ಒಂದೇ ಒಂದು ಬದುಕಿನಲ್ಲಿ ಎಷ್ಟೆಲ್ಲಾ ಪಾತ್ರಗಳನ್ನು ನಿರ್ವಹಿಸುತ್ತೇವೆ! ಅಪ್ಪನಿಗೆ ಮಗ, ಅಜ್ಜಿಗೆ ಮೊಮ್ಮಗ, ಮಾವನಿಗೆ ಅಳಿಯ, ಮಾವನ ಮಗಳಿಗೆ ಭಾವಯ್ಯ, ಹೆಂಡತಿಗೆ ಗಂಡ, ಮಗನಿಗೆ ಅಪ್ಪ, ಮೊಮ್ಮಗನಿಗೆ ಅಜ್ಜ! ಊರ ಜನರಿಗೆ ಗ್ರಾಮಸ್ಥ, ಬೇರೆ ಊರಿಗೆ ಹೋದರೆ ನೆಂಟ, ಹೊಸ ಊರಿಗೆ ಹೋದರೆ ಅತಿಥಿ, ಆಫೀಸಿನಲ್ಲಿ ಮ್ಯಾನೇಜರ್ರು, ಆಳಿಗೆ ಯಜಮಾನ, ಅಂಗಡಿಯವನಿಗೆ ಕಸ್ಟಮರ್ರು.... ಹೀಗೇ.
ಈಗ ನನ್ನನ್ನೇ ತೆಗೆದುಕೊಳ್ಳಿ: ಅಪ್ಪ 'ಪಾಪು' ಅನ್ನುತ್ತಾನೆ, ಅಮ್ಮ 'ಅಪ್ಪಿ' ಅನ್ನುತ್ತಾಳೆ, ಮಾವ 'ಗುಂಡ' ಅನ್ನುತ್ತಾನೆ, ಊರ ಹುಡುಗರೆಲ್ಲ 'ಸೂರು' ಅನ್ನುತ್ತಾರೆ, ಪ್ರೀತಿಯ ಕೆಲವು ಗೆಳೆಯರು 'ಸುಶಿ' ಅನ್ನುತ್ತಾರೆ, ಆಫೀಸಿನಲ್ಲಿ ನಾನು 'ಮಿಸ್ಟರ್ ಸುಶ್ರುತ್', ಆಫೀಸಿಗೆ ಬರುವ client ಗಳಿಗೆ 'ಸರ್'!
ಇಷ್ಟೆಲ್ಲಾ designationಗಳ ಮಧ್ಯೆ 'ನಾನು' ಕಳೆದುಹೋಗಿದ್ದೇನೇನೋ ಅಂತ ಒಮ್ಮೊಮ್ಮೆ ಭಯವಾಗುತ್ತದೆ. ಇವುಗಳೆಲ್ಲದರ ಮಧ್ಯೆ 'ನಾನು' ಯಾರು ಎಂಬ ಪ್ರಶ್ನೆ ಒಮ್ಮೊಮ್ಮೆ ಎದ್ದುಬಿಡುತ್ತದೆ. ಅಥವಾ ಇವೆಲ್ಲವೂ ಸೇರಿದರೇ ನಾನಾ? ಹಾಗೆನಿಲ್ಲ; ಇದರಲ್ಲಿ ಒಂದೆರಡು ಪಾತ್ರಗಳನ್ನು ತೆಗೆದರೂ ನಾನು ನಾನಾಗೇ ಇರುತ್ತೇನಲ್ಲಾ, ಎಲ್ಲವನ್ನೂ ತೆಗೆದರೂ.... ಅರೆ! ಹಾಗಾದರೆ ನಾನೆಲ್ಲಿ?
'ನಾನು' ಯಾರು?
Friday, September 01, 2006
ನಾನು ಓದಿದ ಪುಸ್ತಕ (೨)
ದಾಟು: ಜಾತಿ ಸಮಸ್ಯೆಯ ಒಳನೋಟ
ತಿರುಮಲಾಪುರದ ದೇವಸ್ಥಾನದ ಅರ್ಚಕ ವೆಂಕಟರಮಣಯ್ಯನವರ ಮಗಳು ಸತ್ಯಭಾಮಳೂ ಅದೇ ಊರಿನ ಶಾಸಕ ಮೇಲಗಿರಿ ಗೌಡರ ಮಗ ಶ್ರೀನಿವಾಸನೂ ಪ್ರೀತಿಸುತ್ತಿದ್ದಾರೆ, ಸಧ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ತಿಳಿದು ಕೆರಳುವ ಸತ್ಯಳ ತಂದೆ ಬೆಂಗಳೂರಿಗೆ ಹೋಗಿ ಮಗಳಿಗೆ ಚಪ್ಪಲಿಯಲ್ಲಿ ಹೊಡೆದು ಬುದ್ಧಿ ಹೇಳುತ್ತಾರೆ. ಶ್ರೀನಿವಾಸನ ಪೋಷಕರೂ ಮಗನಿಗೆ ಬುದ್ಧಿ ಹೇಳುತ್ತಾರೆ. ಆದರೆ ಸತ್ಯ ನಿರ್ಧಾರ ಬದಲಿಸುವುದಿಲ್ಲ; ಶ್ರೀನಿವಾಸ ನಿರ್ಧಾರ ಬದಲಿಸಿ ಬೇರೆ ಮದುವೆಯಾಗುತ್ತಾನೆ.
ಇತ್ತ ಮಗಳನ್ನು ಚಪ್ಪಲಿಯಲ್ಲಿ ಹೊಡೆದು ಬಂದನಂತರ ವೆಂಕಟರಮಣಯ್ಯರವರನ್ನು ಚಿಂತೆ ಆವರಿಸಿಕೊಳ್ಳುತ್ತದೆ. ವೆಂಕಟರಮಣಯ್ಯನವರಿಗೆ ಒಂದು ಚರಿತ್ರೆ ಇರುತ್ತದೆ. ಅವರ ಹೆಂಡತಿ ಪ್ರಾಯದಲ್ಲೇ ತೀರಿಕೊಂಡಿರುತ್ತಾರೆ. ದೇವಸ್ಥಾನದ ಅರ್ಚಕರಾಗಿದ್ದ ಇವರು ಮೊದಮೊದಲು ಹೆದರಿದರೂ, ಕೊನೆಗೂ ದೈಹಿಕ ವಾಂಛೆಗಳನ್ನು ಗೆಲ್ಲಲಾಗದೆ, ಮಾತಂಗಿ ಎಂಬ ಹರಿಜನರ ವಿಧವೆ ಹೆಂಗಸಿನೊಂದಿಗೆ ಸಂಬಂಧವಿರಿಸಿಕೊಳ್ಳುತ್ತಾರೆ. ಈ ಗೌಪ್ಯ ಸಂಬಂಧಕ್ಕೆ ಸುಮಾರು ಮೂರು ವರ್ಷಗಳ ಕಾಲವಾಗಿರುತ್ತದೆ. ಆಗ ಒಂದು ಎಡವಟ್ಟು ಆಗಿಬಿಡುತ್ತದೆ. ಮಾತಂಗಿ ಗರ್ಭವತಿಯಾಗಿಬಿಡುತ್ತಾಳೆ. ಗುಡಿಯ ಅರ್ಚಕರಿಗೆ ಕೆಟ್ಟ ಹೆಸರು ಬರುವುದನ್ನು ಬಯಸದ ಅವಳು ದೂರದ ಊರೊಂದಕ್ಕೆ ಹೋಗಿ, ಅಲ್ಯಾರೊಂದಿಗೋ ಮದುವೆಯಾಗಿ, ಮಗುವನ್ನು ಹೆತ್ತು ಸಾಕಿಕೊಳ್ಳುತ್ತಾಳೆ. ಇದೆಲ್ಲಾ ಆಗಿದ್ದು ಈಗ ಹದಿನೈದಿಪತ್ತು ವರ್ಷಗಳಾಗಿವೆ.
ಈ ಮಧ್ಯೆ ದೇಶದಲ್ಲಿ ಜಾತಿಮತ ಭೇದವೆಲ್ಲಾ ದೂರವಾಗಬೇಕು ಅಂತ ಕ್ರಾಂತಿಯಾಯಿತು. ಹೊಲೆಯ, ಮಾದಿಗರನ್ನು 'ಹರಿಜನರು' ಅಂತ ಕರೆಯಬೇಕು ಎಂದಾಯಿತು. ಅವರೆಲ್ಲರಿಗೂ ದರಖಾಸ್ತಿನಲ್ಲಿ ಸರ್ಕಾರ ಜಮೀನು ಮಂಜೂರು ಮಾಡಿತು. ಮಂಗಳೂರು ಹೆಂಚಿನ ಮನೆ ಕಟ್ಟಿಸಿಕೊಟ್ಟಿತು. ಹರಿಜನರನ್ನು ಅಸ್ಪೃಷ್ಯರನ್ನಾಗಿ ಕಾಣಬಾರದು ಎಂದರು. ಅವರನ್ನು ದೇವಸ್ಥಾನದೊಳಕ್ಕೆ ಬಿಡುವಂತೆಯೂ ಆಯಿತು.
ಈಗ ವೆಂಕಟರಮಣಯ್ಯನವರಿಗೆ ಇವೆಲ್ಲ ನೆನಪಾಗಿ, ಸತ್ಯಳ ವರ್ತನೆ, ವಾದಗಳೊಂದಿಗೆ ಹೋಲಿಸಿಕೊಳ್ಳುವಂತಾಗಿ, ಗೊಂದಲವಾಗಿ, ಅದೇ ಯೋಚನೆ ಮಾಡಿ ಮಾಡಿ, ಹುಚ್ಚೇ ಹಿಡಿದುಬಿಡುತ್ತದೆ. ಅವರು ಮನೆ ಬಿಟ್ಟು, ದೇವಸ್ಥಾನದ ಪೂಜೆ ಬಿಟ್ಟು, ತೋಟದಲ್ಲಿ ಗುಡಿಸಲೊಂದನ್ನು ಕಟ್ಟಿಕೊಂಡು ಬದುಕಲು ಶುರುವಿಡುತ್ತಾರೆ.
ಪ್ರೇಮಭಂಗವಾಗಿ, ವಿಷಯ ಬಹಿರಂಗವಾಗಿ, ಸಮಾಜದಲ್ಲಿ ಹೆಸರು ಕಳೆದುಕೊಂಡು, ಅದರಿಂದಾಗಿ ಕೆಲಸ ಕಳೆದುಕೊಂಡು, ಸೀರೆ ಅಂಗಡಿಯೊಂದರಲ್ಲಿ ಕೂಲಿ ಮಾಡಿಕೊಂಡಿದ್ದ ಸತ್ಯ ಅಪ್ಪನ ಪರಿಸ್ಥಿತಿಯ ಸುದ್ಧಿ ಕೇಳಿ ಊರಿಗೆ ಧಾವಿಸುತ್ತಾಳೆ. ತೋಟದ ಗುಡಿಸಲಿನಲ್ಲಿ ಹುಚ್ಚು ಹಿಡಿದಿದ್ದ ತಂದೆ ವೆಂಕಟರಮಣಯ್ಯ, ಸತ್ಯಳಿಗೆ ಯಜ್ನೋಪವೀತ ಧಾರಣೆ ಮಾಡುತ್ತಾರೆ. 'ಇನ್ನು ಮೇಲೆ ಹೋಮ, ಹವನ ಮಾಡು' ಅಂತ ಭೋದಿಸುತ್ತಾರೆ. ಅವರ ಹುಚ್ಚು ಹುಚ್ಚು ಮಾತುಗಳ ಸಹಾಯದಿಂದಲೇ ಸತ್ಯ ಮಾತಂಗಿಯ ಜತೆಗಿನ ಗೌಪ್ಯ ಸಂಬಂಧದ ಇತಿಹಾಸವನ್ನು ಪತ್ತೆ ಮಾಡುತ್ತಾಳೆ. ಅವರನ್ನು ಮಾನಸಿಕ ರೋಗ ತಜ್ನರ ಬಳಿಗೊಯ್ದು ಕಾಯಿಲೆ ವಾಸಿ ಮಾಡಿಸಿಕೊಂಡು ಬರಬೇಕು ಎಂಬ ಪ್ರಯತ್ನಗಳು ನಡೆಯುತ್ತಿರುವಾಗಲೇ ವೆಂಕಟರಮಣಯ್ಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.
ಸತ್ಯ ತಾನು ಇನ್ನು ಇದೇ ಗುಡಿಸಲಿನಲ್ಲಿ ಬದುಕಬೇಕು ಅಂತ ತೀರ್ಮಾನಿಸುತ್ತಾಳೆ. ಅಪ್ಪ ಬರೆದಿಟ್ಟಿದ್ದ ವಿಲ್ ಅವಳ ನೆರವಿಗೆ ಬರುತ್ತದೆ. ತಾನು ಶೂದ್ರಳಂತೆ ಬದುಕಬೇಕಂತ ನಿರ್ಧರಿಸುತ್ತಾಳೆ. ಮಾತಂಗಿಗಿಂತ ಶೂದ್ರಳಾಗಬೇಕೆಂದುಕೊಳ್ಳುತ್ತಾಳೆ.
ಅತ್ತ ಶ್ರೀನಿವಾಸನ ಹೆಂಡತಿ ಹೆರಿಗೆಯ ಸಮಯದಲ್ಲಿ ತೀರಿಕೊಳ್ಳುತ್ತಾಳೆ. ಶ್ರೀನಿವಾಸ ಒಬ್ಬಂಟಿಯಾಗುತ್ತಾನೆ. ಸತ್ಯಳ ನೆನಪು ಕಾಡಲಾರಂಭಿಸುತ್ತದೆ. ಅವನಿಗೆ ಮತ್ತೊಂದು ಮದುವೆ ಮಾಡುವ ಎಲ್ಲಾ ಪ್ರಯತ್ನಗಳೂ ವಿಫಲವಾದಾಗ ಅವನ ಪೋಷಕರು 'ಹೋಗಲಿ, ಸತ್ಯಳನ್ನೇ ಮಾಡಿಕೋ ಹಾಗಾದರೆ' ಅನ್ನುತ್ತಾರೆ. ಆದರೆ ಈ ಬಾರಿ ಸತ್ಯಳೇ ಮದುವೆಯನ್ನು ನಿರಾಕರಿಸುತ್ತಾಳೆ ಮತ್ತು ಹರಿಜನರ ಬೆಟ್ಟಯ್ಯನ ಮಗಳು ಮೀರಾಳನ್ನು ಮಾಡಿಕೋ ಎಂದು ಶ್ರೀನಿವಾಸನಿಗೆ ಸಲಹೆ ಕೊಡುತ್ತಾಳೆ. ಅವಳು ಕೊಟ್ಟ ಸಲಹೆಯೇ ಗಟ್ಟಿಯಾಗಿ ಶ್ರೀನಿವಾಸನಿಗೆ ಮೀರಾಳ ಮೇಲೆ ಎಂಥದೋ ಆಕರ್ಷಣೆ ಉಂಟಾಗಿ ಪ್ರೇಮ ಶುರುವಾಗುತ್ತದೆ. ಅವರಿಬ್ಬರೂ ಮದುವೆ ಮಾಡಿಕೊಳ್ಳುವುದು ಅಂತ ತೀರ್ಮಾನಿಸುತ್ತಾರೆ.
ಆದರೆ ಶ್ರೀನಿವಾಸನ ಮನೆಯಿಂದ ಈ ಬಗ್ಗೆ ತೀವ್ರವಾದ ವಿರೋಧ ಬರುತ್ತದೆ. ಬೆಟ್ಟಯ್ಯನವರೂ ಮನಸ್ಪೂರ್ತಿಯಿಂದ ಒಪ್ಪಿಕೊಳ್ಳುವುದಿಲ್ಲ. ಎಷ್ಟೇ ಬುದ್ಧಿ ಹೇಳಿದರೂ ಸರಿಹೋಗದ ಶ್ರೀನಿವಾಸನನ್ನು ತಹಬಂದಿಗೆ ತರಲು ಅವನ ತಂದೆ ಉಪಾಯ ಮಾಡಿ ಸತ್ಯಳ ಅಣ್ಣ ವೆಂಕಟೇಶನನ್ನು ಈ ಕೆಲಸಕ್ಕೆ ನೇಮಿಸುತ್ತಾರೆ. ವೆಂಕಟೇಶ ಶ್ರೀನಿವಾಸನನ್ನು ಕಂಡು 'ಸತ್ಯ ಮೀರಾಳ ಅಣ್ಣ ಮೋಹನದಾಸನನ್ನು ಮದುವೆಯಾಗುತ್ತಿದ್ದಾಳೆ. ನಿನಗೆ ಈ ರೀತಿ ದಡ ಕಾಣಿಸಿ ಅವನನ್ನು ಮದುವೆಯಾಗುವ ಪ್ಲಾನು ಅವಳದು' ಎಂದು ಸುಳ್ಳು ಹೇಳಿ ಕಿವಿ ತಿರುಚುತ್ತಾನೆ. ಸದರಿ ಮೋಹನದಾಸ -ಬೆಟ್ಟಯನವರ ಮಗ- ತಲತಲಾಂತರದಿಂದ ತಮ್ಮನ್ನು ಕೀಳಾಗಿ ಕಾಣುತ್ತಾ ಬಂದಿರುವ ಮೇಲುಜಾತಿಯವರ ಮೇಲೆ ಸದಾ ಕೆಂಡ ಕಾರುವ, ಇವೆಲ್ಲಾ ತೊಲಗಬೇಕಾದರೆ ಕ್ರಾಂತಿಯಾಗಬೇಕು, ಮೇಲು ಜಾತಿಯವರ ಮೇಲೆ ಹೇಗಾದರೂ ಮಾಡಿ ಸೇಡು ತೀರಿಸಿಕೊಳ್ಳಬೇಕು ಎಂಬ ತತ್ವವುಳ್ಳ ತರುಣ. 'ಜಾತಿ ಬೇಧವೆಲ್ಲಾ ಸುಳ್ಳು' ಎಂಬ ವಾದವನ್ನು ನಂಬಿದ್ದ ಮತ್ತು ಎಂದೂ ಜಾತಿ ಬೇಧ ಮಾಡದ ಸತ್ಯಳೊಂದಿಗೆ ಅವನಿಗೆ ಪರಿಚಯ ಬೆಳೆಯುತ್ತದೆ. ಅವನ ಅನೇಕ ತತ್ವಗಳನ್ನು ಸತ್ಯ ಒಪ್ಪದಿದ್ದರೂ, ಅವನು ಒತ್ತಾಯಿಸಿದ ಕಾರಣ, ಈ ಜಾತಿಪದ್ಧತಿ, ಹರಿಜನ, ಅಸ್ಪೃಷ್ಯತೆ, ಸಮಾನತೆ -ಇವುಗಳನ್ನೆಲ್ಲಾ ಸಮೀಕರಿಸಿ ಒಂದು ಪುಸ್ತಕ ಬರೆದು ಮೋಹನದಾಸನಿಗೆ ಕೊಡಲು ಒಪ್ಪಿರುತ್ತಾಳೆ. ಇದೇ ಕಾರಣಕ್ಕೆ ಅವಳ ತೋಟದ ಮನೆಗೆ ಪದೇ ಪದೇ ಬಂದು ಹೋಗುತ್ತಿದ್ದ ಮೋಹನದಾಸನ ಬಗ್ಗೆ ತಿಳಿದಿದ್ದ ಶ್ರೀನಿವಾಸ, ಈಗ 'ಸತ್ಯ ಅವನನ್ನೇ ಮದುವೆಯಾಗುತ್ತಿದ್ದಾಳಂತೆ' ಎಂಬ ಸುಳ್ಳು ಸುದ್ಧಿಯನ್ನು ಸುಲಭವಾಗಿ ನಂಬುತ್ತಾನೆ. ತನ್ನಂತಹ ತನ್ನನ್ನೇ ನಿರಾಕರಿಸಿ ಆ ಮಾದಿಗನನ್ನು ಕಟ್ಟಿಕೊಳ್ಳಲು ಹೊರಟಿರುವ ಸತ್ಯಳ ಬಗ್ಗೆ ದ್ವೇಷ ಬೆಳೆಯುತ್ತದೆ. 'ತಾನು ಮಾದಿಗನಿಂತ ಕೀಳಾ?' ಅಂತ ಕೇಳಿಕೊಳ್ಳುತ್ತಾನೆ. ಮೀರಾಳೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಳ್ಳುತ್ತಾನೆ. ಮೀರಾ ಈ ಅವಮಾನ, ಅನ್ಯಾಯವನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ. ಮತ್ತು ಶ್ರೀನಿವಾಸ ಅಕ್ಷರಶಃ ಹುಚ್ಚನೇ ಆಗಿಬಿಡಿತ್ತಾನೆ.
ಈ ಮಧ್ಯೆ ಸತ್ಯ ಬರೆದ ಪುಸ್ತಕ ಕ್ರಾಂತಿಯನ್ನೇ ಉಂಟುಮಾಡುತ್ತದೆ. ಮೋಹನದಾಸನ ನೇತೃತ್ವದಲ್ಲಿ ಎಲ್ಲೆಡೆಯಲ್ಲೂ ಹರಿಜನರು ಸಂಘಗಳನ್ನು ಕಟ್ಟಿಕೊಂಡು ಹೋರಾಟಕ್ಕಿಳಿಯುತ್ತಾರೆ. ದೇವಸ್ಥಾನಗಳಿಗೆ ನುಗ್ಗುತ್ತಾರೆ. ಹೋಟೆಲುಗಳಿಗೆ ನುಗ್ಗುತ್ತಾರೆ. ಅವರ ಕ್ರಾಂತಿಯಾತ್ರೆ ತಿರುಮಲಾಪುರಕ್ಕೂ ಬರುತ್ತದೆ. ಜನಗಳ ತೀವ್ರ ಪ್ರತಿರೋಧದ ನಡುವೆಯೂ ಅವರು ದೇವಸ್ಥಾನವನ್ನು ಪ್ರವೇಶಿಸುತ್ತಾರೆ. ಆದರೆ ಮಂಗಳಾರತಿಯ ಸಂದರ್ಭದಲ್ಲಿ ಮೋಹನದಾಸನಿಗೆ ಅಂತಃಪ್ರಜ್ನೆ ಕೆಲಸ ಮಾಡಿ ಮೂರ್ಚೆ ತಪ್ಪಿ ಬಿದ್ದುಬಿಡುತ್ತಾನೆ.
ಎಚ್ಚರಾಗಿ ಎದ್ದು ಊರುಬಿಟ್ಟು ಹೋದವನಿಗೆ ತನ್ನ ಊರಲ್ಲೇ ತನಗಾದ ಈ ಅವಮಾನವನ್ನು ಸಹಿಸಲಾಗದೆ, ದೇವಸ್ಥಾನವನ್ನೇ, ಮೇಲ್ಜಾತಿಯ ಜನಗಳನ್ನೇ, ಇಡೀ ಊರನ್ನೇ ನಾಶ ಮಾಡುವ ಸಂಚು ಹೂಡುತ್ತಾನೆ. ಡೈನಾಮೈಟ್ ಇಟ್ಟು ಕೆರೆಯನ್ನು ಉಡಾಯಿಸಿಬಿಡುತ್ತಾನೆ. ಇಡೀ ಊರು ಜಲಪ್ರಳಯಕ್ಕೊಳಗಾಗುತ್ತದೆ. ಸತ್ಯ ಮೂಕವಿಸ್ಮಿತಳಾಗಿ ದೂರ ನಿಂತು ನೋಡುತ್ತಾಳೆ.
ತಿರುಮಲಾಪುರದ ದೇವಸ್ಥಾನದ ಅರ್ಚಕ ವೆಂಕಟರಮಣಯ್ಯನವರ ಮಗಳು ಸತ್ಯಭಾಮಳೂ ಅದೇ ಊರಿನ ಶಾಸಕ ಮೇಲಗಿರಿ ಗೌಡರ ಮಗ ಶ್ರೀನಿವಾಸನೂ ಪ್ರೀತಿಸುತ್ತಿದ್ದಾರೆ, ಸಧ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ತಿಳಿದು ಕೆರಳುವ ಸತ್ಯಳ ತಂದೆ ಬೆಂಗಳೂರಿಗೆ ಹೋಗಿ ಮಗಳಿಗೆ ಚಪ್ಪಲಿಯಲ್ಲಿ ಹೊಡೆದು ಬುದ್ಧಿ ಹೇಳುತ್ತಾರೆ. ಶ್ರೀನಿವಾಸನ ಪೋಷಕರೂ ಮಗನಿಗೆ ಬುದ್ಧಿ ಹೇಳುತ್ತಾರೆ. ಆದರೆ ಸತ್ಯ ನಿರ್ಧಾರ ಬದಲಿಸುವುದಿಲ್ಲ; ಶ್ರೀನಿವಾಸ ನಿರ್ಧಾರ ಬದಲಿಸಿ ಬೇರೆ ಮದುವೆಯಾಗುತ್ತಾನೆ.
ಇತ್ತ ಮಗಳನ್ನು ಚಪ್ಪಲಿಯಲ್ಲಿ ಹೊಡೆದು ಬಂದನಂತರ ವೆಂಕಟರಮಣಯ್ಯರವರನ್ನು ಚಿಂತೆ ಆವರಿಸಿಕೊಳ್ಳುತ್ತದೆ. ವೆಂಕಟರಮಣಯ್ಯನವರಿಗೆ ಒಂದು ಚರಿತ್ರೆ ಇರುತ್ತದೆ. ಅವರ ಹೆಂಡತಿ ಪ್ರಾಯದಲ್ಲೇ ತೀರಿಕೊಂಡಿರುತ್ತಾರೆ. ದೇವಸ್ಥಾನದ ಅರ್ಚಕರಾಗಿದ್ದ ಇವರು ಮೊದಮೊದಲು ಹೆದರಿದರೂ, ಕೊನೆಗೂ ದೈಹಿಕ ವಾಂಛೆಗಳನ್ನು ಗೆಲ್ಲಲಾಗದೆ, ಮಾತಂಗಿ ಎಂಬ ಹರಿಜನರ ವಿಧವೆ ಹೆಂಗಸಿನೊಂದಿಗೆ ಸಂಬಂಧವಿರಿಸಿಕೊಳ್ಳುತ್ತಾರೆ. ಈ ಗೌಪ್ಯ ಸಂಬಂಧಕ್ಕೆ ಸುಮಾರು ಮೂರು ವರ್ಷಗಳ ಕಾಲವಾಗಿರುತ್ತದೆ. ಆಗ ಒಂದು ಎಡವಟ್ಟು ಆಗಿಬಿಡುತ್ತದೆ. ಮಾತಂಗಿ ಗರ್ಭವತಿಯಾಗಿಬಿಡುತ್ತಾಳೆ. ಗುಡಿಯ ಅರ್ಚಕರಿಗೆ ಕೆಟ್ಟ ಹೆಸರು ಬರುವುದನ್ನು ಬಯಸದ ಅವಳು ದೂರದ ಊರೊಂದಕ್ಕೆ ಹೋಗಿ, ಅಲ್ಯಾರೊಂದಿಗೋ ಮದುವೆಯಾಗಿ, ಮಗುವನ್ನು ಹೆತ್ತು ಸಾಕಿಕೊಳ್ಳುತ್ತಾಳೆ. ಇದೆಲ್ಲಾ ಆಗಿದ್ದು ಈಗ ಹದಿನೈದಿಪತ್ತು ವರ್ಷಗಳಾಗಿವೆ.
ಈ ಮಧ್ಯೆ ದೇಶದಲ್ಲಿ ಜಾತಿಮತ ಭೇದವೆಲ್ಲಾ ದೂರವಾಗಬೇಕು ಅಂತ ಕ್ರಾಂತಿಯಾಯಿತು. ಹೊಲೆಯ, ಮಾದಿಗರನ್ನು 'ಹರಿಜನರು' ಅಂತ ಕರೆಯಬೇಕು ಎಂದಾಯಿತು. ಅವರೆಲ್ಲರಿಗೂ ದರಖಾಸ್ತಿನಲ್ಲಿ ಸರ್ಕಾರ ಜಮೀನು ಮಂಜೂರು ಮಾಡಿತು. ಮಂಗಳೂರು ಹೆಂಚಿನ ಮನೆ ಕಟ್ಟಿಸಿಕೊಟ್ಟಿತು. ಹರಿಜನರನ್ನು ಅಸ್ಪೃಷ್ಯರನ್ನಾಗಿ ಕಾಣಬಾರದು ಎಂದರು. ಅವರನ್ನು ದೇವಸ್ಥಾನದೊಳಕ್ಕೆ ಬಿಡುವಂತೆಯೂ ಆಯಿತು.
ಈಗ ವೆಂಕಟರಮಣಯ್ಯನವರಿಗೆ ಇವೆಲ್ಲ ನೆನಪಾಗಿ, ಸತ್ಯಳ ವರ್ತನೆ, ವಾದಗಳೊಂದಿಗೆ ಹೋಲಿಸಿಕೊಳ್ಳುವಂತಾಗಿ, ಗೊಂದಲವಾಗಿ, ಅದೇ ಯೋಚನೆ ಮಾಡಿ ಮಾಡಿ, ಹುಚ್ಚೇ ಹಿಡಿದುಬಿಡುತ್ತದೆ. ಅವರು ಮನೆ ಬಿಟ್ಟು, ದೇವಸ್ಥಾನದ ಪೂಜೆ ಬಿಟ್ಟು, ತೋಟದಲ್ಲಿ ಗುಡಿಸಲೊಂದನ್ನು ಕಟ್ಟಿಕೊಂಡು ಬದುಕಲು ಶುರುವಿಡುತ್ತಾರೆ.
ಪ್ರೇಮಭಂಗವಾಗಿ, ವಿಷಯ ಬಹಿರಂಗವಾಗಿ, ಸಮಾಜದಲ್ಲಿ ಹೆಸರು ಕಳೆದುಕೊಂಡು, ಅದರಿಂದಾಗಿ ಕೆಲಸ ಕಳೆದುಕೊಂಡು, ಸೀರೆ ಅಂಗಡಿಯೊಂದರಲ್ಲಿ ಕೂಲಿ ಮಾಡಿಕೊಂಡಿದ್ದ ಸತ್ಯ ಅಪ್ಪನ ಪರಿಸ್ಥಿತಿಯ ಸುದ್ಧಿ ಕೇಳಿ ಊರಿಗೆ ಧಾವಿಸುತ್ತಾಳೆ. ತೋಟದ ಗುಡಿಸಲಿನಲ್ಲಿ ಹುಚ್ಚು ಹಿಡಿದಿದ್ದ ತಂದೆ ವೆಂಕಟರಮಣಯ್ಯ, ಸತ್ಯಳಿಗೆ ಯಜ್ನೋಪವೀತ ಧಾರಣೆ ಮಾಡುತ್ತಾರೆ. 'ಇನ್ನು ಮೇಲೆ ಹೋಮ, ಹವನ ಮಾಡು' ಅಂತ ಭೋದಿಸುತ್ತಾರೆ. ಅವರ ಹುಚ್ಚು ಹುಚ್ಚು ಮಾತುಗಳ ಸಹಾಯದಿಂದಲೇ ಸತ್ಯ ಮಾತಂಗಿಯ ಜತೆಗಿನ ಗೌಪ್ಯ ಸಂಬಂಧದ ಇತಿಹಾಸವನ್ನು ಪತ್ತೆ ಮಾಡುತ್ತಾಳೆ. ಅವರನ್ನು ಮಾನಸಿಕ ರೋಗ ತಜ್ನರ ಬಳಿಗೊಯ್ದು ಕಾಯಿಲೆ ವಾಸಿ ಮಾಡಿಸಿಕೊಂಡು ಬರಬೇಕು ಎಂಬ ಪ್ರಯತ್ನಗಳು ನಡೆಯುತ್ತಿರುವಾಗಲೇ ವೆಂಕಟರಮಣಯ್ಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.
ಸತ್ಯ ತಾನು ಇನ್ನು ಇದೇ ಗುಡಿಸಲಿನಲ್ಲಿ ಬದುಕಬೇಕು ಅಂತ ತೀರ್ಮಾನಿಸುತ್ತಾಳೆ. ಅಪ್ಪ ಬರೆದಿಟ್ಟಿದ್ದ ವಿಲ್ ಅವಳ ನೆರವಿಗೆ ಬರುತ್ತದೆ. ತಾನು ಶೂದ್ರಳಂತೆ ಬದುಕಬೇಕಂತ ನಿರ್ಧರಿಸುತ್ತಾಳೆ. ಮಾತಂಗಿಗಿಂತ ಶೂದ್ರಳಾಗಬೇಕೆಂದುಕೊಳ್ಳುತ್ತಾಳೆ.
ಅತ್ತ ಶ್ರೀನಿವಾಸನ ಹೆಂಡತಿ ಹೆರಿಗೆಯ ಸಮಯದಲ್ಲಿ ತೀರಿಕೊಳ್ಳುತ್ತಾಳೆ. ಶ್ರೀನಿವಾಸ ಒಬ್ಬಂಟಿಯಾಗುತ್ತಾನೆ. ಸತ್ಯಳ ನೆನಪು ಕಾಡಲಾರಂಭಿಸುತ್ತದೆ. ಅವನಿಗೆ ಮತ್ತೊಂದು ಮದುವೆ ಮಾಡುವ ಎಲ್ಲಾ ಪ್ರಯತ್ನಗಳೂ ವಿಫಲವಾದಾಗ ಅವನ ಪೋಷಕರು 'ಹೋಗಲಿ, ಸತ್ಯಳನ್ನೇ ಮಾಡಿಕೋ ಹಾಗಾದರೆ' ಅನ್ನುತ್ತಾರೆ. ಆದರೆ ಈ ಬಾರಿ ಸತ್ಯಳೇ ಮದುವೆಯನ್ನು ನಿರಾಕರಿಸುತ್ತಾಳೆ ಮತ್ತು ಹರಿಜನರ ಬೆಟ್ಟಯ್ಯನ ಮಗಳು ಮೀರಾಳನ್ನು ಮಾಡಿಕೋ ಎಂದು ಶ್ರೀನಿವಾಸನಿಗೆ ಸಲಹೆ ಕೊಡುತ್ತಾಳೆ. ಅವಳು ಕೊಟ್ಟ ಸಲಹೆಯೇ ಗಟ್ಟಿಯಾಗಿ ಶ್ರೀನಿವಾಸನಿಗೆ ಮೀರಾಳ ಮೇಲೆ ಎಂಥದೋ ಆಕರ್ಷಣೆ ಉಂಟಾಗಿ ಪ್ರೇಮ ಶುರುವಾಗುತ್ತದೆ. ಅವರಿಬ್ಬರೂ ಮದುವೆ ಮಾಡಿಕೊಳ್ಳುವುದು ಅಂತ ತೀರ್ಮಾನಿಸುತ್ತಾರೆ.
ಆದರೆ ಶ್ರೀನಿವಾಸನ ಮನೆಯಿಂದ ಈ ಬಗ್ಗೆ ತೀವ್ರವಾದ ವಿರೋಧ ಬರುತ್ತದೆ. ಬೆಟ್ಟಯ್ಯನವರೂ ಮನಸ್ಪೂರ್ತಿಯಿಂದ ಒಪ್ಪಿಕೊಳ್ಳುವುದಿಲ್ಲ. ಎಷ್ಟೇ ಬುದ್ಧಿ ಹೇಳಿದರೂ ಸರಿಹೋಗದ ಶ್ರೀನಿವಾಸನನ್ನು ತಹಬಂದಿಗೆ ತರಲು ಅವನ ತಂದೆ ಉಪಾಯ ಮಾಡಿ ಸತ್ಯಳ ಅಣ್ಣ ವೆಂಕಟೇಶನನ್ನು ಈ ಕೆಲಸಕ್ಕೆ ನೇಮಿಸುತ್ತಾರೆ. ವೆಂಕಟೇಶ ಶ್ರೀನಿವಾಸನನ್ನು ಕಂಡು 'ಸತ್ಯ ಮೀರಾಳ ಅಣ್ಣ ಮೋಹನದಾಸನನ್ನು ಮದುವೆಯಾಗುತ್ತಿದ್ದಾಳೆ. ನಿನಗೆ ಈ ರೀತಿ ದಡ ಕಾಣಿಸಿ ಅವನನ್ನು ಮದುವೆಯಾಗುವ ಪ್ಲಾನು ಅವಳದು' ಎಂದು ಸುಳ್ಳು ಹೇಳಿ ಕಿವಿ ತಿರುಚುತ್ತಾನೆ. ಸದರಿ ಮೋಹನದಾಸ -ಬೆಟ್ಟಯನವರ ಮಗ- ತಲತಲಾಂತರದಿಂದ ತಮ್ಮನ್ನು ಕೀಳಾಗಿ ಕಾಣುತ್ತಾ ಬಂದಿರುವ ಮೇಲುಜಾತಿಯವರ ಮೇಲೆ ಸದಾ ಕೆಂಡ ಕಾರುವ, ಇವೆಲ್ಲಾ ತೊಲಗಬೇಕಾದರೆ ಕ್ರಾಂತಿಯಾಗಬೇಕು, ಮೇಲು ಜಾತಿಯವರ ಮೇಲೆ ಹೇಗಾದರೂ ಮಾಡಿ ಸೇಡು ತೀರಿಸಿಕೊಳ್ಳಬೇಕು ಎಂಬ ತತ್ವವುಳ್ಳ ತರುಣ. 'ಜಾತಿ ಬೇಧವೆಲ್ಲಾ ಸುಳ್ಳು' ಎಂಬ ವಾದವನ್ನು ನಂಬಿದ್ದ ಮತ್ತು ಎಂದೂ ಜಾತಿ ಬೇಧ ಮಾಡದ ಸತ್ಯಳೊಂದಿಗೆ ಅವನಿಗೆ ಪರಿಚಯ ಬೆಳೆಯುತ್ತದೆ. ಅವನ ಅನೇಕ ತತ್ವಗಳನ್ನು ಸತ್ಯ ಒಪ್ಪದಿದ್ದರೂ, ಅವನು ಒತ್ತಾಯಿಸಿದ ಕಾರಣ, ಈ ಜಾತಿಪದ್ಧತಿ, ಹರಿಜನ, ಅಸ್ಪೃಷ್ಯತೆ, ಸಮಾನತೆ -ಇವುಗಳನ್ನೆಲ್ಲಾ ಸಮೀಕರಿಸಿ ಒಂದು ಪುಸ್ತಕ ಬರೆದು ಮೋಹನದಾಸನಿಗೆ ಕೊಡಲು ಒಪ್ಪಿರುತ್ತಾಳೆ. ಇದೇ ಕಾರಣಕ್ಕೆ ಅವಳ ತೋಟದ ಮನೆಗೆ ಪದೇ ಪದೇ ಬಂದು ಹೋಗುತ್ತಿದ್ದ ಮೋಹನದಾಸನ ಬಗ್ಗೆ ತಿಳಿದಿದ್ದ ಶ್ರೀನಿವಾಸ, ಈಗ 'ಸತ್ಯ ಅವನನ್ನೇ ಮದುವೆಯಾಗುತ್ತಿದ್ದಾಳಂತೆ' ಎಂಬ ಸುಳ್ಳು ಸುದ್ಧಿಯನ್ನು ಸುಲಭವಾಗಿ ನಂಬುತ್ತಾನೆ. ತನ್ನಂತಹ ತನ್ನನ್ನೇ ನಿರಾಕರಿಸಿ ಆ ಮಾದಿಗನನ್ನು ಕಟ್ಟಿಕೊಳ್ಳಲು ಹೊರಟಿರುವ ಸತ್ಯಳ ಬಗ್ಗೆ ದ್ವೇಷ ಬೆಳೆಯುತ್ತದೆ. 'ತಾನು ಮಾದಿಗನಿಂತ ಕೀಳಾ?' ಅಂತ ಕೇಳಿಕೊಳ್ಳುತ್ತಾನೆ. ಮೀರಾಳೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಳ್ಳುತ್ತಾನೆ. ಮೀರಾ ಈ ಅವಮಾನ, ಅನ್ಯಾಯವನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ. ಮತ್ತು ಶ್ರೀನಿವಾಸ ಅಕ್ಷರಶಃ ಹುಚ್ಚನೇ ಆಗಿಬಿಡಿತ್ತಾನೆ.
ಈ ಮಧ್ಯೆ ಸತ್ಯ ಬರೆದ ಪುಸ್ತಕ ಕ್ರಾಂತಿಯನ್ನೇ ಉಂಟುಮಾಡುತ್ತದೆ. ಮೋಹನದಾಸನ ನೇತೃತ್ವದಲ್ಲಿ ಎಲ್ಲೆಡೆಯಲ್ಲೂ ಹರಿಜನರು ಸಂಘಗಳನ್ನು ಕಟ್ಟಿಕೊಂಡು ಹೋರಾಟಕ್ಕಿಳಿಯುತ್ತಾರೆ. ದೇವಸ್ಥಾನಗಳಿಗೆ ನುಗ್ಗುತ್ತಾರೆ. ಹೋಟೆಲುಗಳಿಗೆ ನುಗ್ಗುತ್ತಾರೆ. ಅವರ ಕ್ರಾಂತಿಯಾತ್ರೆ ತಿರುಮಲಾಪುರಕ್ಕೂ ಬರುತ್ತದೆ. ಜನಗಳ ತೀವ್ರ ಪ್ರತಿರೋಧದ ನಡುವೆಯೂ ಅವರು ದೇವಸ್ಥಾನವನ್ನು ಪ್ರವೇಶಿಸುತ್ತಾರೆ. ಆದರೆ ಮಂಗಳಾರತಿಯ ಸಂದರ್ಭದಲ್ಲಿ ಮೋಹನದಾಸನಿಗೆ ಅಂತಃಪ್ರಜ್ನೆ ಕೆಲಸ ಮಾಡಿ ಮೂರ್ಚೆ ತಪ್ಪಿ ಬಿದ್ದುಬಿಡುತ್ತಾನೆ.
ಎಚ್ಚರಾಗಿ ಎದ್ದು ಊರುಬಿಟ್ಟು ಹೋದವನಿಗೆ ತನ್ನ ಊರಲ್ಲೇ ತನಗಾದ ಈ ಅವಮಾನವನ್ನು ಸಹಿಸಲಾಗದೆ, ದೇವಸ್ಥಾನವನ್ನೇ, ಮೇಲ್ಜಾತಿಯ ಜನಗಳನ್ನೇ, ಇಡೀ ಊರನ್ನೇ ನಾಶ ಮಾಡುವ ಸಂಚು ಹೂಡುತ್ತಾನೆ. ಡೈನಾಮೈಟ್ ಇಟ್ಟು ಕೆರೆಯನ್ನು ಉಡಾಯಿಸಿಬಿಡುತ್ತಾನೆ. ಇಡೀ ಊರು ಜಲಪ್ರಳಯಕ್ಕೊಳಗಾಗುತ್ತದೆ. ಸತ್ಯ ಮೂಕವಿಸ್ಮಿತಳಾಗಿ ದೂರ ನಿಂತು ನೋಡುತ್ತಾಳೆ.
Subscribe to:
Posts (Atom)